Naraka Chaturdashi ನರಕ ಚತುರ್ದಶಿ

What is Naraka Chaturdashi ?

ನರಕ ಚತುರ್ದಶಿ –   ಆಶ್ವೀಜ ಬಹುಳ ಚತುರ್ದಶಿ

ನರಕ ಚತುರ್ದಶಿ ಹಬ್ಬವನ್ನು ಆಶ್ವಯುಜ ಕೃಷ್ಣಪಕ್ಷ ಚತುರ್ದಶಿ ದಿನ ಆಚರಿಸಲಾಗುತ್ತದೆ.  ಈ ಹಬ್ಬವನ್ನು ದೈತ್ಯ ನರಕಾಸುರನ ಸಂಹಾರ ನಿಮಿತ್ತ ಸಂಭ್ರಮದಿಂದ ಆಚರಿಸಲಾಗುತ್ತಿದೆ.

Naraka Chaturdashi is celebrated to mark the end of Narakasura named daithya.  It is celebrated on Ashwija Krishna Chaturdashi.

 

*ನರಕಾಸುರನ ಹಿನ್ನೆಲೆ ಏನು?*

ಪರಮಾತ್ಮನ ವರಾಹಾವತಾರ ಕಾಲದಲ್ಲಿ ಭೂದೇವಿಯಲ್ಲಿ ಜನಿಸಿದ್ದ.  (ಪಂಚ ಭೂತಾಭಿಮಾನಿಗಳಲ್ಲಿ ಕೊನೆಯವಳು ಭೂದೇವಿ. ಸಾಕ್ಷಾತ್ ಲಕ್ಷ್ಮೀ ಅಲ್ಲ.)  ಮೂಲಪ್ರಕೃತಿಯಾದ ಮಹಾಲಕ್ಷ್ಮಿಯ ಭೂರೂಪದ ಆವೇಶ ಭೂದೇವಿಯಲ್ಲಿತ್ತು.  ಅವನು ಪ್ರಾಗ್ಜೋತಿಷಪುರದ ರಾಜನಾಗಿದ್ದ.  ಭೂದೇವಿಯ ಸುತನಾದ್ದರಿಂದ ಇವನನ್ನು *ಭೌಮಾಸುರ* ಎನ್ನುತ್ತಿದ್ದರು.  ನರಕಾಸುರನ ಬಳಿ ವೈಷ್ಣವಾಸ್ತ್ರ ಇತ್ತು ಮತ್ತು ಅವನಿಗೆ ಬ್ರಹ್ಮದೇವರಿಂದ ಅವಧ್ಯತ್ವ ವರವಿದ್ದಿತು. ಆದ್ದರಿಂದ ಅವನನ್ನು ಯಾರೂ ಸೋಲಿಸಲಾಗುತ್ತಿರಲಿಲ್ಲ.  ದೇವ ಮಾತೆಯಾದ ಅದಿತಿಯ ಕುಂಡಲಿಗಳನ್ನು ಅಪಹರಿಸಿದ್ದ.    ಅವನು ಎಲ್ಲಾ ಪ್ರಸಿದ್ಧ ರಾಜರುಗಳನ್ನೂ ಸೋಲಿಸಿ  ಅವರ ಎಲ್ಲಾ ಪುತ್ರಿಯರನ್ನೂ ಅಪಹರಿಸಿದ್ದ.    ಹೀಗೆ ಅಪಹರಿಸಿದ್ದ ರಾಜಕುಮಾರಿಯರ‌ ಸಂಖ್ಯೆಯೇ 16100.   ಈ ಎಲ್ಲಾ ರಾಜಕುಮಾರಿಯರೂ ಮೂಲತಃ: ಅಗ್ನಿಪುತ್ರರಾಗಿದ್ದು   ಸ್ತ್ರೀತ್ವ ಪಡೆದು ಕೃಷ್ಣನ ಮಡದಿಯರಾಗಬೇಕೆಂದು ತಪಸ್ಸು ಮಾಡಿ ಜನಿಸಿದ್ದರು.  ಅಂತಹ ಈ ಎಲ್ಲಾ ರಾಜಕುಮಾರಿಯರೂ ನರಕಾಸುರನ ಬಂಧನದಲ್ಲಿದ್ದರು.  ಒಮ್ಮೆ ನಾರದರು ಇವರನ್ನು ಭೇಟಿಯಾಗಿ ಅತ್ಯಂತ ನಿಷ್ಠೆಯಿಂದ ಲಕ್ಷ್ಮೀ ವ್ರತ ಮಾಡಲು ಹೇಳಿದರು.  ಅದರಂತೆ ಸಂಪೂರ್ಣ ಇಂದ್ರಿಯ ನಿಗ್ರಹವುಳ್ಳವರಾಗಿ ವ್ರತವನ್ನು ಮಾಡಿದರು.  ವಾಯುದೇವರು ಇವರ ತಪಸ್ಸಿಗೆ ಮೆಚ್ಚಿ ಶ್ರೀ ಕೃಷ್ಣನೇ ಪತಿಯಾಗುತ್ತಾನೆಂದು ಹೇಳಿದ್ದರು.

ಒಮ್ಮೆ ನಾರದರು  ಕೃಷ್ಣನ  ಹಿರಿಮಡದಿ ರುಕ್ಮಿಣೀದೇವಿಗೆ ಪಾರಿಜಾತ ಪುಷ್ಪವನ್ನು ನೀಡಿ ಶ್ರೀ ಕೃಷ್ಣ ಮತ್ತು ರುಕ್ಮಣಿಯರ ಮಹಿಮೆಯನ್ನು ಪ್ರಶಂಸಿದರು.  ಇದನ್ನು ನೋಡಿದ ಸತ್ಯಭಾಮೆ ತನ್ನನ್ನು ಹೊಗಳಲಿಲ್ಲ ಎಂದು ಕುಪಿತಳಾದಳು.   ಇದನ್ನು ಗಮನಿಸಿದ ಶ್ರೀ ಕೃಷ್ಣನು ನಿನಗೆ ಇಂದ್ರ ಲೋಕದಿಂದ ಪಾರಿಜಾತ ವೃಕ್ಷವನ್ನೇ ತಂದು ಕೊಡುತ್ತೇನೆ ಎಂದನು.  ಇಲ್ಲಿ ರುಕ್ಮಿಣಿ ಮತ್ತು ಸತ್ಯಭಾಮೆ ಇಬ್ಬರೂ ಸಾಕ್ಷಾತ್ ಲಕ್ಷ್ಮೀದೇವಿಯ ಶ್ರೀ ಮತ್ತು ಭೂ ರೂಪಗಳೇ.  ಅವರಿಬ್ಬರಿಗೂ ಯಾವುದೇ ವ್ಯತ್ಯಾಸವಿಲ್ಲ.  ಆದರೂ ಭೂಲೋಕದಲ್ಲಿ ಅವತಾರ ಮಾಡಿದುದರಿಂದ ಸವತಿ ಮತ್ಸರ ತೋರಿದ್ದಾರೆ ಎಂಬುದನ್ನು ಗಮನಿಸಬೇಕು.

ಇದೇ ಸಂದರ್ಭದಲ್ಲಿ ನರಕಾಸುರನಿಂದ ದೇವೇಂದ್ರನು ಪರಾಜಿತನಾಗಿ, ಎಲ್ಲಾ ದೇವತೆಗಳಿಂದ ಋಷಿಮುನಿಗಳಿಂದಲೂ ಕೂಡಿ ಕೃಷ್ಣನ ಸಹಾಯ ಕೋರಿದರು.   ಕೃಷ್ಣನು ಸತ್ಯಭಾಮಾ ಸಹಿತನಾಗಿ ಗರುಡನ ಏರಿ ಪ್ರಾಗ್ಜ್ಯೋತಿಷಪುರವನ್ನು ತಲುಪಿ , ಅಲ್ಲಿ ಇದ್ದ ಎಲ್ಲಾ ದುರ್ಗಗಳನ್ನೂ ಭೇದಿಸಿ, ಐದು ಮುಖದ ಮುರಾಸುರನ ಸಂಹರಿಸಿ, *ಮುರಾರಿ ಎನಿಸಿದನು.  ಆಗ ನರಕಾಸುರ ತನ್ನ  30 ಅಕ್ಷೋಹಿಣಿ ಸೈನ್ಯ ಸಮೇತನಾಗಿ ಯುದ್ಧಕ್ಕೆ ಬಂದು, ಬ್ರಹ್ಮದೇವರು ನೀಡಿದ್ದ *ಶತಘ್ನಿ* ಎಂಬ ಗದೆಯನ್ನು ಕೃಷ್ಣನ ಮೇಲೆ ಎಸೆಯಲು, ತಾನು ಸ್ವತಃ ಅಭೇದ್ಯ, ಅಚ್ಚೇಧ್ಯನಾದರೂ ಅಪ್ರಾಕೃತ ಶರೀರಿಯಾದರೂ, ಆ ಗದಾ ಪ್ರಹಾರದಿಂದ ಶ್ರಮಗೊಂಡವನಂತೆ ನಟಿಸುತ್ತ ಮೂರ್ಛಿತನಾದನು.  ಆಗ ಸತ್ಯಭಾಮೆಯು ಕೃಷ್ಣನ ಶಾಂಜ್ಞ ಬಿಲ್ಲನ್ನು ಹಿಡಿದು ನರಕಾಸುರನ ಜೊತೆಗೆ ಯುದ್ಧ ಮಾಡಿ ಸೋಲಿಸಿದಳು. (ಇಲ್ಲಿ ಲಕ್ಷ್ಮೀದೇವಿಯ ಭೂರೂಪದ ಆವಿಷ್ಟ ರೂಪದ ಮಗ ನರಕಾಸುರ ಮತ್ತು ಸಾಕ್ಷಾತ್ ಲಕ್ಷ್ಮೀ ದೇವಿಯ ಭೂರೂಪದ ಅವತಾರಳಾದ ಸತ್ಯಭಾಮೆಯಿಂದಲೇ ಪರಾಜಿತನಾದ ನರಕಾಸುರ ಎಂಬುದು ಗಮನಾರ್ಹ). ನಂತರ ಕೃಷ್ಣ ಪರಮಾತ್ಮ ಮೇಲೆದ್ದು ತನ್ನ ಸುದರ್ಶನ ಚಕ್ರದಿಂದ ನರಕಾಸುರನ ಶಿರಸ್ಸು ಛೇದಿಸಿದನು.  ನಂತರ ಕೃಷ್ಣ ಸತ್ಯಭಾಮೆಯೊಂದಿಗೆ ನರಕಾಸುರನ ಅಂತ:ಪುರ ಪ್ರವೇಶಿಸಿ ಅಲ್ಲಿ ನರಕಾಸುರನ ತಾಯಿ ಭೂದೇವಿಯಿಂದ ಅದಿತಿಯ ಕುಂಡಲಿಗಳನ್ನು ಪಡೆದು, ದೇವೇಂದ್ನನಿಗೆ ನೀಡಿ, ನರಕಾಸುರನ ಪುತ್ರ ಭಗದತ್ತನನ್ನು ರಾಜನಾಗಿ ನೇಮಿಸಿದನು.  ನರಕಾಸುರನಿಂದ ಬಂಧಿತ ೧೬೧೦೦ ರಾಜಕುವರಿಯರನ್ನೂ ಬಂಧ ವಿಮೋಚನೆಗೊಳಿಸಿದನು.  ಶ್ರೀಕೃಷ್ಣ ಭಗದತ್ತನಿಗೆ ಆದೇಶಿಸುತ್ತಾನೆ – ” ಈ ಎಲ್ಲಾ ರಾಜಕುವರಿಯರಿಗೂ ಅಭ್ಯಂಜನ ಸ್ನಾನ ಮಾಡಿಸಿ, ಶ್ರೇಷ್ಠ ಉಡುಗೆ ತೊಡುಗೆ ಕೊಟ್ಟು ಕಳುಹಿಸು”. ಆಗ ಭೂದೇವಿ ತನ್ನ ಮಗ ನರಕಾಸುರನ ಕೊಂದ ರಾಜಕುಮಾರಿಯನ್ನು ವಿಮೋಚನೆ ಮಾಡಿಸಿದ ನೆನಪಿಗಾಗಿ ಈ ದಿನವನ್ನು ಹಬ್ಬವನ್ನಾಗಿ ಆಚರಿಸಬೇಕೆಂದು ಕೋರಿದರು.

*ಏಕೆ ಅಭ್ಯಂಜನವನ್ನು ಮಾಡಿಕೊಳ್ಳಬೇಕು* ? –

ಈ ದಿನ ಶ್ರೀ ಕೃಷ್ಣನು ನರಕಾಸುರನನ್ನು ಸಂಹರಿಸಿದಾಗ ನರಕಾಸುರನು ಒಂದು ವರವನ್ನು ಕೇಳುತ್ತಾನೆ.  “ನನ್ನ ಸಂಹಾರದ ನೆನಪಿಗಾಗಿ ಎಲ್ಲರೂ ಅಭ್ಯಂಜನವನ್ನು ಮಾಡಬೇಕು ಮತ್ತು ದೀಪ ಪ್ರಜ್ವಲನವನ್ನು ಮಾಡಬೇಕು” ಎಂದು ಕೇಳಿದುದರಿಂದ ಕೃಷ್ಣನು ಹಾಗೆಯೇ ಆಗಲಿ ಎಂದು ಅನುಗ್ರಹಿಸಿದ್ದನು.   ಶ್ರೀಕೃಷ್ಣನು ನರಕಾಸುರನನ್ನು ಸಂಹರಿಸಿದಾಗ ಅವನ ಮೇಲೆ ರಕ್ತದ ಕಲೆಗಳು ಸಿಡಿದಿದ್ದವು.  ಅದನ್ನು ತೊಳೆದುಕೊಳ್ಳಲೆಂಬಂತೆ ಶ್ರೀಕೃಷ್ಣನೂ ಸಹ ಎಣ್ಣೆ-ನೀರನ್ನು ಹಾಕಿಕೊಂಡಿದ್ದನು.  ಅದರಂತೆ ಈದಿನ ಹಬ್ಬವನ್ನಾಗಿ ಆಚರಿಸಿ, ಅಭ್ಯಂಜನ ಮಾಡಿ ಕೊಳ್ಳುವ ಪರಿಪಾಠವಿದೆ.  ನರಕಾಸುರ ಸಾಯುವ ಮುನ್ನ ಈ ದಿನವನ್ನು ಬಣ್ಣಬಣ್ಣದ ದೀಪಗಳನ್ನು ಹಚ್ಚಿ ಆಚರಿಸಬೇಕೆಂದು ಕೋರಿದನು.  ಅದರಂತೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತೇವೆ.

 

*Who is Narakasura* ?

Narakasura is a daithya born to Bhoodevi and Varahadevaru.   He was the king of Pragjyotisha Nagar (now in Assam). He had occupied that King’s position after overthrowing daanava king Ghatakasura.  He did a severe penance to please Lord Brahma.  Narakasura asked Brahma to bestow a boon that he shall die only in the hands of Bhoodevi, his mother.  He did not asked the boon of immortality, as he was sure that Brahma can’t give that boon.  So he asked for the killing only at the hands of Bhoodevi. 

*Why Krishna & Satyabhama killed Narakasura* ?

Narakasura in association with Murasura, had brought control of the entire world under his belt.  He went to Swargaloka and attacked Devendra, who had to flew out of Indraloka.  He stole 16100 women (gopikaa stree, who are originally sons of Agni, born as ladies just to marry to Krishna) and Narakasura had kept them in his Jail. 

Narakasura was very much arrogant he didn’t even let Aditi, the mother of the Devas. Aditi, had some precious heavenly ear rings, which was glowing even in the dark.  Narakasura tore the ear rings from Aditi, and took it.  Aditi, the mother of gods, (Devategalu) approached Satyabhama for help, who in turn approached Srikrishna. Narakasura had 11 Akshohini Sainya,

All gods approached Srihari with the leadership of Indra, who assured them to put an end to Narakasura.  But Narakasura had a boon that he would face death only at the hands of his mother Bhoodevi. So, Krishna asks his wife Sathyabhama, the reincarnation of Bhudevi, to be his charioteer in the battle with Naraka.

Krishna went alongwith Satyabhama, attacked Narakasura and his fort, riding on his chariot Garuda.  Naraka’s palace was guarded by the five-headed daithya Murasura .  Murasura hurled countless weapons at Krishna, but  Krishna shot each one down with his bow and arrow. Then Krishna killed him with his Sudarshana dislocating Mura’s five heads.  That is why Krishna got the name “Murari”.

Then a fierce fight went on with Krishna and Narakasura.  Satyabhama also joined in fighting with the daithya. Krishna also killed Narakasura with his Sudarshana Chakra and freed all the 16100 women who were imprisoned by the daithya. Bhoodevi then praises Krishna and begged him to take Naraka’s son Bhagadatta under his protection.  Krishna placed Bhagadatta (Narakasura’s son Bhagadatta who had fought for Kauravaas in Kurukshetra War)  on the throne and then freed all prisoners. The devathaas showered Krishna with flowers from the heavens. Before dying, Narakasura, requested a boon that his death anniversary should be celebrated by all people on earth with colorful light. This day is celebrated as ‘Naraka Chaturdashi’ – the first day of Diwali.  Narakasura’s death is celebrated as the victory of light over darkness

*Why oil bath to be taken on Naraka Chaturdashi day* ?-

It is said Lord Krishna had an oil bath to rid himself off the blood spattered on his body when Naraka was killed. The tradition is followed and people offer prayers on the previous day of the Naraka Chaturdashi to the vessel in which water is being heated for having bath. Hindus light fireworks, which are regarded as the effigies of Narakasura who was killed on this day. Taking OIL-BATH is a must on this day. That Mahalakshmi would be getting from the bed. It has been said to  perform  pooja according to usage and custom. ನರಕಚತುರ್ದಶಿಯಂದು ಜಲದಲ್ಲಿ ಗಂಗೆಯೂ, ತೈಲದಲ್ಲಿ ಲಕ್ಷ್ಮೀದೇವಿಯೂ, ವಿಶೇಷವಾಗಿ ಸನ್ನಿಹಿತರಾಗಿರುವರು.

 

tailaabhyaMjana snaana saMkalpa

Achamana, sankalpa, pranavasya ………… Ashwayuja maasa, krishna paksha,   chaturdashyaaM shubhatithou chaMdrOdayakaalE narakaaMtaka shrI gOpaalakRuShNa prEraNayaa shrI gOpaalakRuShNa prItyarthaM saparivaaraaya shrI gOpaalakRuShNaaya sugaMdhi tailaabhyaMga samarpaNa pUjaaM kariShyE

Srikrishna paramathma has given a blessings on Narakasura that those who does the tailabhyanjana on this Day, i.e., Ashwayuja Bahula Chaturdashi will have putra, poutra, aishwarya and everything.  This is called as “Naraka Chaturdashi”, further they will not fear of “Naraka”.  Abhyanga Snana is a full body massage and ritual bathing on the Naraka Chaturdasi day during Diwali. In some regions, Abhyanga Snana is performed before sunrise.

Before doing Abhyanga Snaana – first have “Enne shaastra” ಎಣ್ಣೆ ಶಾಸ್ತ್ರ from sumangali strees.  Then do have normal snaana.

Then do the abhyanga snaana to the idols in your house.  Then remains of the oil used for devata samarpana to be mixed with the oil and to be applied to the other membes of your house.

eNNeshaastra shall be done with gingelli oil ಎಳ್ಳೆಣ್ಣೆ

There is no Dosha for Vyateepaata, vaidhruthi, maataapitru Samvatsarika Shraddha also.  Everybody has to take abhyanjana snaana.  Even sanyasi have to take abhyanjana snaana on this day.

Yamatarpana –  After snaana, ahneeka, pooja, every one have to give tarpana to Yamadharmarajaru.  As Yamadharmaraja has devatva and pitrutva,  all should give tarpana.  Jeevanpitru must give tarpana without using ellu (tila) facing south direction.  Whereas those who are not having father they should give tarpana with apasavya with ellu (tila).

*Yamatarpana sankalpa* –  Achamana, sankalpa, pranavasya…….  Ashewayuja maasa, krishna paksha, chaturdashyaam, shubatithou, mama naraka bhaya nivruttidwaara sri yamaantargata shrI bhaaratIramaNa muKyapraaNaaMtargata shrI lakShmI narasiMha/vEMkatEsha prItyarthaM, narakachaturdashi parvakaala prayuktaM yama tarpaNamahaM kariShyE.

yamaM tarpayaami | dharmaraajaM tarpayaami |
mRutyuM tarpayaami | aMtakaM tarpayaami |
vaivasvataM tarpayaami | kaalaM tarpayaami |
sarvabhUtakShayaM tarpayaami | ouduMbaraM tarpayaami |
daddhnaM tarpayaami | vRukOdaraM tarpayaami |
nIlaM tarpayaami | paramEShTinaM tarpayaami |
chitraM tarpayaami | chitraguptaM tarpayaami |

After Yamatarpana, those who are eligible for pitru tarpana shall give pitru tarpana to their 12 pitrus.

—————————————

ನರಕ ಚತುರ್ದಶಿ –   ಆಶ್ವೀಜ ಬಹುಳ ಚತುರ್ದಶಿ

 

ನರಕ ಚತುರ್ದಶಿಯಂದೇ ಅಮಾವಾಸ್ಯೆಯ ಆಚರಣೆಯಿರುವಾಗ ಎಣ್ಣೆನೀರು ಹಾಕಿಕೊಳ್ಳಬಹುದಾ ? –   ಹಾಕಿಕೊಳ್ಳಬಹುದು. ನರಕಚತುರ್ದಶಿ ಸ್ನಾನ ಮಾಡಲೇಬೇಕಾದ್ದರಿಂದ ಅಮಾವಾಸ್ಯೆ ಇದ್ದರೂ ಎಣ್ಣೆ ಸ್ನಾನ ಮಾಡಬಹುದು

 

ಮಗಳಿಗೆ ಮದುವೆ ಮಾಡಿದ ನಂತರ ಬರುವ ಮೊದಲ ದೀಪಾವಳಿ ನಿಮಿತ್ತ ಅಳಿಯ, ಮಗಳಿಗೆ ವಿಶೇಷ ಉಡುಗೊರೆ ನೀಡಬೇಕು.

 

ತೈಲಾಭ್ಯಂಜನ ಕಡ್ಡಾಯ –  ನರಕ ಚತುರ್ದಶಿಯಂದು ಪ್ರತಿಯೊಬ್ಬ ಜೀವಿಯೂ ಅಭ್ಯಂಜನವನ್ನು ಮಾಡಲೇಬೇಕು.  ಇಲ್ಲದಿದ್ದರೆ ದಾರಿದ್ರ್ಯಾದಿಗಳಿಂದ ಪೀಡಿತರಾಗುವರು. ಈ ದಿನ ಗಂಗೆಯು ಜಲದಲ್ಲಿ ಮತ್ತು ತೈಲದಲ್ಲಿ ಲಕ್ಷ್ಮೀದೇವಿಯು ವಿಶೇಷವಾಗಿ ಸನ್ನಿಹಿತಳಾಗಿರುತ್ತಾರೆ. ಸಾಮಾನ್ಯವಾಗಿ ತಂದೆ ತಾಯಿಗಳ ಶ್ರಾದ್ಧ ದಿನಗಳಲ್ಲಿ, ವ್ಯತೀಪಾತ, ವೈಧೃತಿ ಯೋಗಗಳಲ್ಲಿ ಅಭ್ಯಂಜನವನ್ನು ಮಾಡಿಕೊಳ್ಳುವ ಸಂಪ್ರದಾಯವಿಲ್ಲ.  ವಿಧವೆಯರೂ, ಸನ್ಯಾಸಿಗಳೂ ಅಭ್ಯಂಜನವನ್ನು ಮಾಡಿಕೊಳ್ಳಬಾರದು ಸಾಮಾನ್ಯವಾಗಿ.  ಆದರೆ ನರಕ ಚತುರ್ದಶಿಯಂದು ಇದೆಲ್ಲ ಇದ್ದರೂ ಕೂಡ ಅಭ್ಯಂಜನವನ್ನು ಮಾಡಲೇಬೇಕು.   ಸನ್ಯಾಸಿಗಳೂ, ವಿಧವೆಯರೂ ಅಭ್ಯಂಜನವನ್ನು ಮಾಡಿಕೊಳ್ಳಲೇಬೇಕು.

 

ಎಣ್ಣೆಶಾಸ್ತ್ರ (ನರಕ ಚತುರ್ದಶಿಯಂದು) – 

ಮೊದಲು ಮನೆಯ ಹಿರಿಯರೊಬ್ಬರು ಸ್ನಾನ ಮಾಡಿ ಎಣ್ಣೆಯನ್ನು ಪರಮಾತ್ಮನಿಗೆ ಸಮರ್ಪಿಸಬೇಕು.  ಈದಿನ ಪ್ರಾತ: ಕಾಲ ಶುಚಿರ್ಭೂತನಾಗಿ ಬಿಸಿನೀರು, ಎಳ್ಳೆಣ್ಣೆ, ಸೀಗೆಪುಡಿ, ಅರಿಶಿನ, ಮುಂತಾದುವನ್ನು ದೇವರ ಮುಂದಿಟ್ಟು ಪ್ರಾರ್ಥಿಸಬೇಕು.

 

ಎಣ್ಣೆ ಶಾಸ್ತ್ರವನ್ನು ಸೂರ್ಯೋದಯದ ಮುನ್ನವೇ ಮಾಡಬೇಕು.

ಎಣ್ಣೆ ಹಚ್ಚಿಕೊಂಡ ನಂತರ ಸ್ನಾನ ಆಗುವವರೆಗೂ ಯಾರಿಗೂ ನಮಸ್ಕಾರ ಮಾಡಬೇಡಿ.

ಪ್ರಾತಃ ಕಾಲೇ ನರಕಾಂತಕ ಶ್ರೀ ರುಕ್ಮಿಣಿ ಸತ್ಯಭಾಮಾ ಸಹಿತ ಶ್ರೀ ಗೋಪಾಲಕೃಷ್ಣ ಪ್ರೇರಣಯಾ, ಶ್ರೀ ಗೋಪಾಲಕೃಷ್ಣ ಪ್ರೀತ್ಯರ್ಥಂ  ಸಶ್ರೀಕಾಯ ಸಪರಿವಾರಾಯ ಶ್ರೀ ಗೋಪಾಲಕೃಷ್ಣಾಯ ಸುಗಂಧಿ ತೈಲಾಭ್ಯಂಗ ಸ್ನಾನ ಸಮರ್ಪಣಂ ಕರಿಷ್ಯೇ.

“ತೈಲೇ ಲಕ್ಷ್ಮೀ: ಜಲೇ ಗಂಗಾ ದೀಪಾವಲ್ಯಾಂ ಚತುರ್ದಶೀ |
ಪ್ರಾತ: ಸ್ನಾನಂ ತು ಯ: ಕುರ್ಯಾತ್ ಯಮಲೋಕಂ ನ ಪಶ್ಯತಿ|
ತೈಲದಲ್ಲಿ ಲಕ್ಷಿಯೂ, ಜಲದಲ್ಲಿ ಗಂಗೆಯನ್ನೂ ಮನಸಾ ಚಿಂತಿಸಬೇಕು.

ಯಾರು ನರಕ ಚತುರ್ದಶಿ ದಿನದಂದು ದೀಪವನ್ನು ಬೆಳಗಿಸಿ, ದೇವರಿಗೆ ಎಣ್ಣೆಯ ಸಮರ್ಪಿಸಿ ತಾವೂ ಅಭ್ಯಂಜನ ಮಾಡಿಕೊಳ್ಳುತ್ತಾರೋ ಅವರಿಗೆ ಯಮಲೋಕ ವಾಸವಿರುವುದಿಲ್ಲ.

ಲಕ್ಷ್ಮಿಯು ಶ್ರೀಮನ್ನಾರಾಯಣನಿಗೆ ಅಭ್ಯಂಜನ ಸ್ನಾನ ಮಾಡಿಸುವಳೆಂದು ಭಾವಿಸಿ, ನಾರಾಯಣನಿಗೆ ಸಮರ್ಪಿಸಿ, ನಂತರ ಆ ಎಣ್ಣೆಯಿಂದಲೇ ಎಲ್ಲರಿಗೂ ಎಣ್ಣೆ ಶಾಸ್ತ್ರ ಮಾಡತಕ್ಕದ್ದು.

 

ಎಣ್ಣೆ ಶಾಸ್ತ್ರ ಎಲ್ಲರೂ ಮಾಡಿಸಿಕೊಳ್ಳತಕ್ಕದ್ದು.  ಮೊದಲು ಮನೆಯ ಹೆಂಗಸರು ಗಂಡಸರನ್ನೆಲ್ಲ ಕೂಡಿಸಿ, ದೇವರಿಗೆ ಸಮರ್ಪಿಸಿದ ಎಣ್ಣೆಯನ್ನು ಹಚ್ಚುವ ಶಾಸ್ತ್ರ ಮಾಡುತ್ತಾರೆ.  ಇಲ್ಲಿ ಎಣ್ಣೆ ಶಾಸ್ತ್ರಕ್ಕೆ ಕೂಡುವಾಗ ಉತ್ತರೀಯವಿರಲೇ ಬೇಕು.   ಮೊದಲು ದೇವರಬಳಿ, ತುಳಸಿಯ ಗಿಡದ ಬಳಿ ದೀಪವನ್ನು ಹಚ್ಚಬೇಕು.   ನಂತರ ಒಂದು ಮಣೆಯ ಮೇಲೋ ಅಥವಾ ಚಾಪೆಯ ಮೇಲೋ ಕುಳಿತುಕೊಳ್ಳಬೇಕು.  ಮನೆಯ ಹಿರಿಯ ಹೆಣ್ಣುಮಕ್ಕಳು ಎಲ್ಲರಿಗೂ ಮೊದಲು ಹಣೆಯಲ್ಲಿ ಕುಂಕುಮ ತಿಲಕವಿಡುತ್ತಾರೆ. ಚಿನ್ನದ ಉಂಗುರವನ್ನು  ಬಳಸಿ  ಎಣ್ಣೆ ಶಾಸ್ತ್ರ ಮಾಡಬೇಕು . ಚಿನ್ನದ ಉಂಗುರ ಇಲ್ಲದ ಪಕ್ಷದಲ್ಲಿ ಪಾರಿಜಾತ ಹೂ ಆಗಲಿ ಅಥವಾ ಮಲ್ಲಿಗೆ ಹೂ ಆಗಲಿ ಬಳಸಬಹುದು.  ಪ್ರತಿಯೊಬ್ಬರಿಗೂ ವಿಳ್ಳೆದೆಲೆಯ ಪಟ್ಟಿಯನ್ನು ಕೊಡುತ್ತಾರೆ ಅಥವಾ ಎಲ್ಲರಿಗೂ ಮುಟ್ಟಿಸಿ ಯಾರಾದರೂ ಒಬ್ಬರಿಗೆ ವಿಳ್ಳೆದೆಲೆ ಪಟ್ಟಿಯನ್ನು ನೀಡುತ್ತಾರೆ.   ಒಂದು ಬೆಳ್ಳಿಯ ಬಟ್ಟಲಿನಲ್ಲಿ ದೇವರಿಗೆ ಸಮರ್ಪಿಸಿದ ಎಣ್ಣೆಯನ್ನು ಅರಿಶಿನ ಸೇರಿಸಿ ಎಲ್ಲರಿಗೂ ಹಣೆಯಿಂದ ಪಾದದವರೆಗೂ ಸ್ವಲ್ಪ ಸ್ವಲ್ಪ ಹಚ್ಚುತ್ತಾರೆ. 

 

ಎಣ್ಣೆ ಶಾಸ್ತ್ರ  ಮಾಡುವಾಗ ಹೇಳುವ ಮಂತ್ರ

ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಶ್ಚ ವಿಭೀಷಣ: |
ಕೃಪ: ಪರಶುರಾಮಶ್ಚ ಸಪ್ತ್ಯೇತೇ ಚಿರಂಜೀವಿನ: ||
ಎಂದು ಏಳು ಸಲ ಭೂಮಿಗೆ ಮುಟ್ಟಿಸಿ, ಮೂರು ಸಲ ತಲೆಗೂ, ಭೂಮಿಗೂ ಎಣ್ಣೆಯನ್ನು ತಗುಲಿಸಿ, ಅರಿಶಿನ ಕುಂಕುಮಗಳಿಂದ ಪೂಜಿಸಿ ಅಭ್ಯಂಜನ ಸ್ನಾನ ಮಾಡಬೇಕು.

ಎಣ್ಣೆ ಶಾಸ್ತ್ರಕ್ಕೆ ಎಳ್ಳೆಣ್ಣೆಯನ್ನು ಉಪಯೋಗಿಸಬೇಕು.

ಎಣ್ಣೆ ಶಾಸ್ತ್ರ ಮಾಡಿಸಿಕೊಳ್ಳುವುದು ಪೂರ್ವಾಭಿಮುಖವಾಗಿ ಕೂಡಬೇಕು.

ಎಣ್ಣೆ ಶಾಸ್ತ್ರಕ್ಕೆ ಕೂಡುವವರು ದೇವರಿಗೆ ನಮಿಸಿ ಕೂಡಬೇಕು.

ನಂತರ ಎಲ್ಲರಿಗೂ ಆರತಿ ಮಾಡಬೇಕು.  ಆ ಸಮಯದಲ್ಲಿ ಈ ದೇವರನಾಮವನ್ನು ಹಾಡುವ ಕ್ರಮವಿದೆ.
*ಎಣ್ಣೆ ಶಾಸ್ತ್ರ ಮಾಡುವ ಸಮಯದಲ್ಲಿ  ಹಾಡುವ ಹಾಡು*

 

ಬಣ್ಣಿಸಿ ಗೋಪಿ ತಾ ಹರಸಿದಳು ||ಪ||
ಎಣ್ಣೆಯನೊತ್ತುತ ಯದುಕುಲ ತಿಲಕಗೆ || ಅ.ಪ.||
ಆಯುಷ್ಯವಂತನಾಗು ಅತಿ ಬಲ್ಲಿದನಾಗು |
ಮಯದ ಖಳರ ಮರ್ಧನನಾಗು |
ರಾಯರ ಪಾಲಿಸು ರಕ್ಕಸರ ಸೋಲಿಸು |
ವಾಯಸುತಗೆ ನೀ ನೊಡೆಯನಾಗೆನುತಲಿ ||1||
ಧೀರನು ನೀನಾಗು ದಯಾಂಬುಧಿಯಾಗು |
ಆ ರುಕ್ಮಿಣಿಗೆ ನೀನರಸನಾಗು |
ಮಾರನ ಪಿತನಾಗು ಮಧುಸೂದನನಾಗು |
ದ್ವಾರಾವತಿಗೆ ನೀ ದೊರೆಯಾಗೆನುತಲಿ ||2||
ಆನಂದ ನೀನಾಗು ಅಚ್ಯುತ ನೀನಾಗು |
ದಾನವಾಂತಕನಾಗು ದಯವಾಗು |
ಶ್ರೀನಿವಾಸನಾಗು ಶ್ರೀನಿಧಿ ನೀನಾಗು |
ಜ್ಜಾನಿ ಪುರಂದರ ವಿಠಲನಾಗೆನುತಲಿ ||3||
*ಆರತಿ ಹಾಡು*

ಸರಸಿಜ ನಯನಗೆ ಸಾಗರಶಯನಗೆ
ನಿರುತ ಸುಖಾನಂದಭರಿತನಾದವಗೆ
ಬರೆಸಿ ಉತ್ತರವ ಕಳುಹಿ ಹರುಷದಿ ತಂದ ಸತಿಯ-
ರರಸಿ ರುಕ್ಮಿಣಿ ಸಹಿತ ಹರುಷದಿ ಕುಳಿತ ಹರಿಗೆ
ಸರಸದಾರತಿಯ ಬೆಳಗಿರೆ ||ಪ||

ನಿಂದ್ಯ ಪರಿಹರಿಸಲು ಬಂದು ಯುದ್ಧವ ಮಾಡಿ
ಸಿಂಧುಗಟ್ಟಿದ ರಾಮಚಂದ್ರಗೆವೊಂದಿಸುತ
ತಂದು ಮಗಳ ಧಾರೆ ಮಂದರೋದ್ಧ್ಧರಗೆರೆಯೆ
ಜಾಂಬುವಂತ್ಯೇರ ಸಹಿತಾನಂದದಿ ಕುಳಿತ ಹರಿಗೆ ||1||

ಮಿತ್ರೆ ಕಾಳಿಂದಿ ಭದ್ರಾ ಅಚ್ಚುತನೆಡಬಲ
ಲಕ್ಷಣ ನೀಲ ನಕ್ಷತ್ರದಂದಲಿ
ಒಪ್ಪುವಾ ಚಂದ್ರನಂಥ ವಾರಿಜಾಕ್ಷನು ಇರಲು
ಅಷ್ಟಭಾರ್ಯೆಯರ ಸಹಿತ ನಕ್ಕು ಕುಳಿತ ಹರಿಗೆ ||2||

ನಾಶವಾಗಲಿ ನರಕಾಸುರನ ಮಂದಿರ ಪೊಕ್ಕು
ಏಸುಜನ್ಮದ ಪುಣ್ಯ ಒದಗಿ ಶ್ರೀಹರಿಯು
ಶ್ರೀಶನೊಲಿದ ಭೀಮೇಶಕೃಷ್ಣನು ಸೋಳ-
ಸಾಸಿರ ಸತಿಯರಿಂದ್ವಿಲಾಸದಿ ಕುಳಿತ ಹರಿಗೆ ||3||

 

*ತೈಲಾಭ್ಯಂಜನ ಸ್ನಾನ ಸಂಕಲ್ಪ*

ಆಚಮನ, ಸಂಕಲ್ಪ –  ಪ್ರಣವಸ್ಯ………………….

ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ರೀ ಶ್ವೇತವರಾಹ ಕಲ್ಪೇ ವ್ಯೆವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೂದ್ವೀಪೇ ಭರತವರ್ಷೆ ಭರತ ಖಂಡೇ ದಂಡಕಾರಣ್ಯೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲಿವಾಹನ ಶಕೇ ಬೌದ್ಧಾವತಾರೇ ರಾಮಕ್ಷೇತ್ರೇ ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇನ _ ಸಂವತ್ಸರೇ ದಕ್ಷಿಣಾಯನೇ ಶರದೃತೌ ಆಶ್ವಯುಜ ಮಾಸೇ ಕೃಷ್ಣ ಪಕ್ಷೇ ಚತುರ್ದಶ್ಯಾಂ ತಿಥೌ_ವಾಸರೇ ಶುಭನಕ್ಷತ್ರೇ ಶುಭಯೋಗೆ ಶುಭಕರಣೆ ಏವಂಗುಣ ವಿಶೇಷಣ ವಿಶಿಷ್ಟಾಯಾಂ ಶುಭ ಪುಣ್ಯತಿಥೌ, ಚಂದ್ರೋದಯಕಾಲೇ ನರಕಾಂತಕ  ಶ್ರೀ ಗೋಪಾಲಕೃಷ್ಣ ಪ್ರೇರಣಯಾ ಶ್ರೀ ಗೋಪಾಲಕೃಷ್ಣ ಪ್ರೀತ್ಯರ್ಥಂ ಸಪರಿವಾರಾಯ ಶ್ರೀ ಗೋಪಾಲಕೃಷ್ಣಾಯ ಸುಗಂಧಿ ತೈಲಾಭ್ಯಂಗ ಸ್ನಾನಂ ಕರಿಷ್ಯೇ

 

*ಯಮತರ್ಪಣಂ  यमतर्पणं*

ಆಚಮನ, ಸಂಕಲ್ಪ –  ಪ್ರಣವಸ್ಯ………………….

ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ರೀ ಶ್ವೇತವರಾಹ ಕಲ್ಪೇ ವ್ಯೆವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೂದ್ವೀಪೇ ಭರತವರ್ಷೆ ಭರತ ಖಂಡೇ ದಂಡಕಾರಣ್ಯೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲಿವಾಹನ ಶಕೇ ಬೌದ್ಧಾವತಾರೇ ರಾಮಕ್ಷೇತ್ರೇ ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇನ _ ಸಂವತ್ಸರೇ ದಕ್ಷಿಣಾಯನೇ ಶರದೃತೌ ಆಶ್ವಯುಜ ಮಾಸೇ ಕೃಷ್ಣ ಪಕ್ಷೇ ಚತುರ್ದಶ್ಯಾಂ ತಿಥೌ_ವಾಸರೇ ಶುಭನಕ್ಷತ್ರೇ ಶುಭಯೋಗೆ ಶುಭಕರಣೆ ಏವಂಗುಣ ವಿಶೇಷಣ ವಿಶಿಷ್ಟಾಯಾಂ ಶುಭ ಪುಣ್ಯತಿಥೌ, ಮಮ ನರಕ ಭಯ ನಿವೃತ್ತಿದ್ವಾರ ಶ್ರೀ ಯಮಾಂತರ್ಗತ ಶ್ರೀ ಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀ ಲಕ್ಷ್ಮೀ ನರಸಿಂಹ/ವೇಂಕಟೇಶ ಪ್ರೀತ್ಯರ್ಥಂ, ನರಕಚತುರ್ದಶಿ ಪರ್ವಕಾಲ ಪ್ರಯುಕ್ತಂ ಯಮ ತರ್ಪಣಮಹಂ ಕರಿಷ್ಯೇ.

ಯಮಂ ತರ್ಪಯಾಮಿ | ಧರ್ಮರಾಜಂ ತರ್ಪಯಾಮಿ |
ಮೃತ್ಯುಂ ತರ್ಪಯಾಮಿ | ಅಂತಕಂ ತರ್ಪಯಾಮಿ |
ವೈವಸ್ವತಂ ತರ್ಪಯಾಮಿ | ಕಾಲಂ ತರ್ಪಯಾಮಿ |
ಸರ್ವಭೂತಕ್ಷಯಂ ತರ್ಪಯಾಮಿ | ಔದುಂಬರಂ ತರ್ಪಯಾಮಿ |
ದದ್ಧ್ನಂ ತರ್ಪಯಾಮಿ | ವೃಕೋದರಂ ತರ್ಪಯಾಮಿ |
ನೀಲಂ ತರ್ಪಯಾಮಿ | ಪರಮೇಷ್ಟಿನಂ ತರ್ಪಯಾಮಿ |
ಚಿತ್ರಂ ತರ್ಪಯಾಮಿ | ಚಿತ್ರಗುಪ್ತಂ ತರ್ಪಯಾಮಿ |

यमं तर्पयामि । धर्मराजं तर्पयामि ।
मृत्युं तर्पयामि । अंतकं तर्पयामि ।
वैवस्वतं तर्पयामि । कालं तर्पयामि ।
सर्वभूतक्षयं तर्पयामि । औदुंबरं तर्पयामि ।
दद्ध्नं तर्पयामि । वृकोदरं तर्पयामि ।
नीलं तर्पयामि । परमेष्टिनं तर्पयामि ।
चित्रं तर्पयामि । चित्रगुप्तं तर्पयामि ।

——————

ಉಲ್ಕಾದಾನ – ಸೂರ್ಯನು ತುಲಾದಲ್ಲಿರುವಾಗ ಪ್ರದೋಷಕಾಲದಲ್ಲಿ ಉಲ್ಕೆಯನ್ನು ಪ್ರದರ್ಶಿಸಬೇಕು. ಇದರಿಂದ ಮಹಾಲಯಕ್ಕಾಗಿ ಯಮಲೋಕದಿಂದ ಬಂದ ಪಿತೃಗಳು ಹಿಂದಿರುಗುವಾಗ ದಾರಿಯನ್ನು ತೋರಲು ಹಾಗೂ ಕುಲದಲ್ಲಿ ಹುಟ್ಟಿ ಬೆಂಕಿಯಲ್ಲಿ ದಗ್ಧರಾದವರು, ಹಾಗೆಯೇ ಮೃತರಾದವರೂ, ಸಿಡಿಲು-ಮಿಂಚುಗಳಿಂದ ಮೃತರಾದವರೂ ಉತ್ತಮಗತಿಯನ್ನು ಹೊಂದಲು ಮನೆ ಸುತ್ತಮುತ್ತ ದೀಪಗಳನ್ನು ಬೆಳಗಿಸಬೇಕು.

ಅಗ್ನಿದಗ್ದಾ: ಯೇ ಜೀವಾ ಯೇಪ್ಯದಗ್ದಾ: ಕುಲೇ ಮಮ |
ಉಜ್ವಲಜ್ಯೋತಿಷಾ ವರ್ತ್ಮ ಪ್ರಪಶ್ಯಂತು ವ್ರಜಂತು ತೇ |
ಯಮಲೋಕಂ ಪರಿತ್ಯಜ್ಯ ಆಗತಾ ಯೇ ಮಹಾಪದೇ |
ಉಜ್ವಲಜ್ಯೋತಿಷಾ ವರ್ತ್ಮ ಪ್ರಪಶ್ಯಂತೋ ವ್ರಜಂತು ತೇ
|

Leave a Reply

Your email address will not be published.

Sumadhwa Seva © 2022